ಶಿಕ್ಷಣ

“ಫುಡ್ ಆರ್ಟ್” ಆಹಾರ ಮೇಳ 

Views: 42

ಕುಂದಾಪುರ :ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಫುಡ್ ಆರ್ಟ್ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ತೀರ್ಪುಗಾರರಾಗಿ ಆಗಮಿಸಿದ ವಿ.ಕೆ.ಆರ್. ಮತ್ತು ಎಚ್. ಎಮ್.ಎಮ್. ಶಾಲೆಯ ಶೈಕ್ಷಣಿಕ ಸಲಹೆಗಾರರಾದ ಶ್ರೀಮತಿ ಭಾರತಿ ನಾಯ್ಕ್ ಕಾರ್ಯಕ್ರಮವನ್ನು ಉದ್ದೇಶಿಸಿ ನೈಸರ್ಗಿಕ ಆಹಾರದ ಮಹತ್ವ ಹಾಗೂ ಅದರ ಉಪಯೋಗದಲ್ಲಿ ಆಹಾರದ ತಯಾರಿಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಸವಿವರವಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾಲೇಜು ವಿದ್ಯಾರ್ಥಿಗಳಲ್ಲಿ ಆಹಾರದ ನಿರ್ವಹಣೆ ಹಾಗೂ ಹಣದ ನಿರ್ವಹಣೆ ಜೀವನದ ಪ್ರಮುಖ ಅಂಗ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವೀಣಾ ಭಟ್, ಕಾರ್ಯಕ್ರಮದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್, ಜೋಸ್ಲಿನ್ ಅಲ್ಮೇಡ, ವಿನಯ್ ಹೆಗ್ಡೆ ಉಪಸ್ಥಿತರಿದ್ದರು.

ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related Articles

Back to top button