ಯುವಜನ

ಬೈಕ್ ಗಳ ನಡುವೆ ಭೀಕರ ಅಪಘಾತ: ಬಾಲಕಿ ಸಾವು 

Views: 275

ಕನ್ನಡ ಕರಾವಳಿ ಸುದ್ದಿ: ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.

ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃತ ಬಾಲಕಿ ಎಂದು ಗುರುತಿಸಲಾಗಿದೆ.

ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.

ಅಪಘಾತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Back to top button
error: Content is protected !!