ಇತರೆ

ಹೆಂಗವಳ್ಳಿ: ಬಾವಿಗೆ ಬಿದ್ದ ಚಿರತೆ ರಕ್ಷಣೆ 

Views: 190

ಕನ್ನಡ ಕರಾವಳಿ ಸುದ್ದಿ: ಹೆಂಗವಳ್ಳಿ ಗ್ರಾಮದ ಭಜನೆ ಕೊರಗ ಕುಲಾಲ ಎಂಬುವವರ 30 ಅಡಿ ಬಾವಿಗೆ ಬಿದ್ದ ಚಿರತೆಯನ್ನು ಶುಕ್ರವಾರ ರಕ್ಷಿಸಲಾಗಿದೆ.

ಈ ಪ್ರದೇಶದಲ್ಲಿ ಹಲವಾರು ನಾಯಿಗಳನ್ನು ಹೊತ್ತೊಯ್ದು ಚಿರತೆ ಗುರುವಾರ ರಾತ್ರಿ ಹೊತ್ತಿನಲ್ಲಿ ಯಾವುದೋ ಪ್ರಾಣಿಯನ್ನು ಅಟ್ಟಿಸಿಕೊಂಡು ಆಯತಪ್ಪಿ ಆವರಣಕ್ಕೆ ಬಲೆ ಕಟ್ಟಿದ ಬಾವಿಗೆ ಬಿದ್ದಿದೆ.

ಕೂಡಲೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು  ಚಿರತೆಯನ್ನು ಹಿಡಿದು ಅಭಯಾರಣ್ಯಕ್ಕೆ ಬಿಡಲಾಗಿದೆ ಎಂದು ತಿಳಿದುಬಂದಿದೆ.

Related Articles

Back to top button
error: Content is protected !!