ಇತರೆ
ಬೈಕಿಗೆ ಲಾರಿ ಢಿಕ್ಕಿ:ಮೂವರು ಬಾಲಕರು ದಾರುಣ ಸಾವು

Views: 122
ಕನ್ನಡ ಕರಾವಳಿ ಸುದ್ದಿ: ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ಬಾಲಕರು ಮೃತಪಟ್ಟ ದಾರುಣ ಘಟನೆ ಬಾಗಲಕೋಟೆ ನಗರದ ಹೊರವಲಯದ ಸೀಮೀಕೇರಿ ಬೈಪಾಸ್ ಬಳಿ ಸಂಭವಿಸಿದೆ.
ಮೃತರನ್ನು ಮರನಾಳ ಗ್ರಾಮದ ನಿವಾಸಿಗಳಾದ ಸಿದ್ದು (16), ಸಂತೋಷ (16) ಮತ್ತು ಕಾಮಣ್ಣ (16) ಎಂದು ಗುರುತಿಸಲಾಗಿದೆ.
ಇವರು ಸಂಚರಿಸುತ್ತಿದ್ದ ಬೈಕಿಗೆ ಸೀಮೀಕೇರಿ ಬೈಪಾಸ್ ಬಳಿ ಲಾರಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಮೂವರು ಬಾಲಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಠಾಣಾ ಪೊಲೀಸರು ಭೇಟಿ ‘ಪರಿಶೀಲನೆ ನಡೆಸಿದ್ದಾರೆ.