ಸಾಂಸ್ಕೃತಿಕ

ರಾಕೇಶ್ ಪೂಜಾರಿ ಅಂತ್ಯಸಂಸ್ಕಾರಕ್ಕೆ ಗೈರಾಗಿದ್ದಕ್ಕೆ ಭಾರೀ ಆಕ್ರೋಶಕ್ಕೆ ಮಣಿದು ರಿಷಬ್ ಶೆಟ್ಟಿ ಕುಟುಂಬಸ್ಥರಿಗೆ ಸಾಂತ್ವನ

Views: 303

ಕನ್ನಡ ಕರಾವಳಿ ಸುದ್ದಿ: ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್ ರಾಕೇಶ್ ಪೂಜಾರಿ ಕಳೆದ ಮೇ 11ರಂದು ಸ್ನೇಹಿತನ ಮದುವೆ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ರಾಕೇಶ್ ಅವರು ಡ್ಯಾನ್ಸ್ ಮಾಡಿ ಎಲ್ಲರ ಜೊತೆ ಖುಷಿಯಿಂದ ಕಾಲ ಕಳೆದಿದ್ದ ಅವರು ದಿಢೀರ್ ಬಿಪಿ ಲೋ ಆಗಿ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆಗೆ ಸ್ಪಂದಿಸದೆ ಹೃದಯಾಘಾತದಿಂದ ನಿಧನರಾಗಿದ್ದರು.

ರಾಕೇಶ್ ಪೂಜಾರಿ ಅವರು ಕಾಂತಾರ ಚಾಪ್ಟರ್ ಒನ್ ಸಿನಿಮಾದಲ್ಲಿ ಅತಿ ಮುಖ್ಯವಾದ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಕಾಂತಾರ ಸಿನಿಮಾಗಾಗಿ ಡೆಡಿಕೇಟೇಟ್ ಆಗಿದ್ದ ರಾಕೇಶ್ ಅವರು ತಮ್ಮ ಶೂಟಿಂಗ್ ಅನ್ನ ಕಂಪ್ಲೀಟ್ ಮಾಡಿ ಕೊಟ್ಟಿದ್ದರು.

ಕಾಂತಾರ ಚಿತ್ರದಲ್ಲಿ ಅಭಿನಯಿಸಿದ್ದ ರಾಕೇಶ್ ಪೂಜಾರಿ ಅವರ ಅಂತಿಮ ದರ್ಶನಕ್ಕೆ ನಟ ರಿಷಬ್ ಶೆಟ್ಟಿ ಅವರು ಭೇಟಿ ನೀಡಿರಲಿಲ್ಲ. ಅಂತ್ಯಕ್ರಿಯೆ ಹಾಗೂ ಅಂತ್ಯಸಂಸ್ಕಾರಕ್ಕೆ ರಿಷಬ್ ಶೆಟ್ಟಿ ಗೈರಾಗಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕಲಾವಿದನಿಗಿಂತ ಸಿನಿಮಾ ಶೂಟಿಂಗ್ ಹೆಚ್ಚಾಯ್ತಾ ಎಂದು ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಕಿಡಿಕಾರಿದ್ದರು.

ನಿಧನದ 21 ದಿನಗಳ ಬಳಿಕ ರಾಕೇಶ್ ಪೂಜಾರಿ ಅವರ ಮನೆಗೆ ರಿಷಬ್ ಶೆಟ್ಟಿ ಭೇಟಿ ನೀಡಿದ್ದಾರೆ. ಪತ್ನಿ ಪ್ರಗತಿ ಜೊತೆ ರಾಕೇಶ್ ಪೂಜಾರಿ ನಿವಾಸಕ್ಕೆ ತೆರಳಿದ ರಿಷಬ್ ಶೆಟ್ಟಿ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

 

Related Articles

Back to top button
error: Content is protected !!