ಯುವಜನ
ಕೆಲಸ ಸಿಗದಿದ್ದಕ್ಕೆ ವಾಪಸ್ ಊರಿಗೆ ಹೋಗುವ ಬದಲು ಯುವಕನ ನಿರ್ಧಾರ ಏನಾಯಿತು!?

Views: 143
ಕನ್ನಡ ಕರಾವಳಿ ಸುದ್ದಿ: ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ.
ಬಿಹಾರ ಮೂಲದ ರಾಹುಲ್ ಕುಮಾರ್ ಯಾದವ್ (22) ಮೃತ ಯುವಕ. ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ರಾಹುಲ್ ಕೆಲಸ ಸಿಗದೆ ವಾಪಸ್ ಊರಿಗೆ ಹೋಗಲು ನಿರ್ಧಾರ ಮಾಡಿದ್ದ.
ಇತ್ತ ಪೋಷಕರು ಊರಿಗೆ ಬರಲು ನಿರಾಕರಿಸಿದರು ಎನ್ನಲಾಗಿದೆ. ಈ ಹಿನ್ನೆಲೆ ಮನನೊಂದ ಯುವಕ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






