ಮಾಬುಕಳ- ಹಂಗಾರಕಟ್ಟೆಯ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ “ವಿಶ್ವ ಪರಿಸರ ದಿನಾಚರಣೆ”

Views: 42
ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರ ಫಾರ್ಚೂನ್ ಅಕಾಡೆಮಿಕ್ ಮತ್ತು ಚಾರಿಟೇಬಲ್ ಟ್ರಸ್ಟ್ ಪ್ರವರ್ತಿತ ಮಾಬುಕಳ- ಹಂಗಾರಕಟ್ಟೆಯ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆ ನಡೆಯಿತು.
ನಿವ್ರತ್ತ ಅರಣ್ಯಾಧಿಕಾರಿ ರತ್ನಾಕರ ಶೆಟ್ಟಿ ಬಾರ್ಕೂರು ಅವರು ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು ನೀರನ್ನು ಎರೆಯುವುದರ ಮೂಲಕ ಚಾಲನೆ ನೀಡಿದರು. ನಂತರ ಅವರು ಮಾತನಾಡಿ, ಮಾನವನ ದುರಾಸೆಯಿಂದ ಗಾಳಿ, ನೀರು, ಮಣ್ಣು ಪರಿಸರದ ಪ್ರತಿಯೊಂದು ಅಂಶವು ಕಲುಷಿತಗೊಂಡಿದೆ ಹೀಗಾಗಿ ಪ್ರತಿಯೊಬ್ಬರು ಪರಿಸರದ ಬಗ್ಗೆ ಜಾಗೃತಿ ವಹಿಸಬೇಕಾದ ಅವಶ್ಯಕತೆ ಇದೆ ಎಂದರು.
ಬ್ರಹ್ಮಾವರ ಫಾರ್ಚೂನ್ ಅಕಾಡೆಮಿಕ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ತಾರಾನಾಥ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಿಸರವನ್ನು ಪ್ರೀತಿಸಿ, ಪ್ರಕೃತಿ ನಾಶಕ್ಕೆ ಕಡಿವಾಣ ಹಾಕಿ, ಹೆಚ್ಚೆಚ್ಚು ಗಿಡಗಳನ್ನು ಬೆಳೆಸಿ, ಮರಗಳನ್ನು ಉಳಿಸಿ ಪ್ರಕೃತಿ ಮಾತೆಯ ಒಡಲು ಹಸಿರಾಗುವಂತೆ ನೋಡಿಕೊಳ್ಳಿ ಎಂದರು.
ಕೀರ್ತನಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಅಂಜಲಿ ಸ್ವಾಗತಿಸಿದರು.ವನಿತಾ ವಂದಿಸಿದರು.ಅಮೃತ ಕಾರ್ಯಕ್ರಮ ನಿರೂಪಿಸಿದರು.