ಸಾಂಸ್ಕೃತಿಕ
ತೆಂಕು ತಿಟ್ಟಿನ ಹೆಸರಾಂತ ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

Views: 51
ಕನ್ನಡ ಕರಾವಳಿ ಸುದ್ದಿ: ತೆಂಕುತಿಟ್ಟಿನ ಹೆಸರಾಂತ ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ (67) ಶನಿವಾರ ರಾತ್ರಿ ಹೃದಯಾಘಾತದಿಂದ ಮಂಗಳೂರಿನ ಸ್ವಗ್ರಹದಲ್ಲಿ ನಿಧನರಾದರು.
ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಇವರು ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು, ಧರ್ಮಸ್ಥಳ, ಕರ್ನಾಟಕ, ಸಸಿಹಿತ್ತು ಮೇಳಗಳಲ್ಲಿ ತುಳು- ಕನ್ನಡ ಪ್ರಸಂಗಗಳಲ್ಲಿ ಎಲ್ಲಾ ರೀತಿಯ ಪಾತ್ರಗಳನ್ನು ನಿರ್ವಹಿಸಿದ್ದರು. ಹೃದಯ ಸಂಬಂಧಿ ಅನಾರೋಗ್ಯ ನಿಮಿತ್ತ ಕೆಲವು ದಿನಗಳ ಹಿಂದಷ್ಟೇ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಪಡೆದು ಚೇತರಿಸಿ ಮನೆಗೆ ಮರಳಿದ್ದರು.