ವಕ್ವಾಡಿ ಮಹಾಲಿಂಗೇಶ್ವರ ದೇವಸ್ಥಾನ– ಹಳೆಯಮ್ಮ ದೇವಿಯ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ಧಾರ್ಮಿಕ ಪ್ರವಚನ,ಅಭಿನಂದನಾ ಕಾರ್ಯಕ್ರಮ

Views: 95
ಕನ್ನಡ ಕರಾವಳಿ ಸುದ್ದಿ: ವಕ್ವಾಡಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಸಪರಿವಾರ ಶ್ರೀ ಹಳೆಯಮ್ಮ ದೇವಿಯ ಪುನರ್ ಪ್ರತಿಷ್ಠೆ, ಅಷ್ಠ -ಬಂಧ ಬ್ರಹ್ಮಕಲಕೋತ್ಸವ ಮತ್ತು ನಾಗದೇವರ ಪ್ರತಿಷ್ಠೆ ಜೂನ್ 8 ರಿಂದ 10ರ ತನಕ ವೇದಮೂರ್ತಿ ಶ್ರೀ ಪ್ರಸನ್ನ ಕುಮಾರ್ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಜೂನ್ 10ರಂದು ಧಾರ್ಮಿಕ ಸಭೆಯ ಕಾರ್ಯಕ್ರಮವನ್ನು ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸಿಎ ಚಂದ್ರಶೇಖರ್ ಶೆಟ್ಟಿ, ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಲಕ್ಷ್ಮೀ ನಾರಾಯಣ ಹೊಳ್ಳ ಇವರ ಸಮ್ಮುಖದಲ್ಲಿ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಲಾಯಿತು.
ದೇಗುಲದ ಪರ್ಯಾಯ ಅರ್ಚಕ ಗಿರೀಶ್ ಐತಾಳ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಬೆಳಿಗ್ಗೆ ನಡೆದ ಧಾರ್ಮಿಕ ಪ್ರವಚನದಲ್ಲಿ ಡಾ. ವಿಜಯ ಮಂಜರು ಪಾಂಡೇಶ್ವರ- ಸಾಸ್ತಾನ ಅವರು ಮಾತನಾಡಿ, ಬ್ರಹ್ಮಕಲಶೋತ್ಸವ ಎಲ್ಲಾ ದೇವತಾ ಕಾರ್ಯದಲ್ಲಿ ಜ್ಞಾನದ ಪರಕಾಷ್ಠೆಯಲ್ಲಿ ಸಮಾಪ್ತಿಯಾಗುತ್ತದೆ. ಈ ಸತ್ಕಾರ್ಯದಲ್ಲಿ ತೊಡಗಿಸಿ ಕೊಂಡಾಗ ಅರ್ಚಕರು, ಆಡಳಿತ ಮಂಡಳಿ, ಸಾರ್ವಜನಿಕ ಭಕ್ತ ವೃಂದವರಿಗೆ ಪುಣ್ಯಪ್ರಾಪ್ತಿಯಾಗುತ್ತದೆ. ಭಗವಂತನನ್ನು ಶುದ್ಧ ಭಕ್ತಿಯಿಂದ ಅರ್ಜಿಸಿಕೊಂಡಾಗ ಭಗವಂತನ ಸಂಪೂರ್ಣ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರು ದೇಗುಲದ ಅಭಿವೃದ್ಧಿ ಮತ್ತು ಬೃಹ್ಮಕಲಶೋತ್ಸವಕ್ಕೆ ದೇಣಿಗೆ ನೀಡಿದ ದಾನಿಗಳನ್ನು ಅಭಿನಂದಿಸಿ ಮಾತನಾಡಿ, ಈ ಪುಣ್ಯ ಕಾರ್ಯದಲ್ಲಿ ಎಲ್ಲರೂ ಒಗ್ಗಟ್ಟಾಗಿ ಊರಿನ ಸಮಗ್ರ ಅಭಿವೃದ್ಧಿಯಾಗಲಿ ಎಂದು ಶುಭ ಹಾರೈಸಿದರು.
ಶ್ರೀಮತಿ ಅಕ್ಷತಾ ಗಿರೀಶ್ ಐತಾಳ್ ಮತ್ತು ರಾಘವೇಂದ್ರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

