ಸಾಂಸ್ಕೃತಿಕ

ಕಾಂತಾರ ಚಾಪ್ಟರ್-1 ಹಾಸ್ಯ ಕಲಾವಿದ ನಿಜು ಕಲಾಭವನ್ ಸಾವು

Views: 195

ಕನ್ನಡ ಕರಾವಳಿ ಸುದ್ದಿ: ಕಾಂತಾರ ಅಧ್ಯಾಯ 1 ಚಲನಚಿತ್ರದ ಕಲಾವಿದನೋರ್ವ ಹೃದಯಾಘಾತದಿಂದ ಆಗುಂಬೆಯಲ್ಲಿ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಸುತ್ತಮುತ್ತ ಕಳೆದ 15 ದಿನಗಳಿಂದ ಕಾಂತಾರ ಅಧ್ಯಾಯ 1ರ ಚಿತ್ರದ ಚಿತ್ರೀಕರಣ ನಡೆಯುತ್ತಿದೆ.

ಈ ಹಿನ್ನಲೆ ಕೇರಳದ ತ್ರಿಶೂರ್ ಮೂಲದ ಹಾಸ್ಯ ಕಲಾವಿದ ನಿಜು ಕಲಾಭವನ್(55) ಬುಧವಾರ ಶೂಟಿಂಗ್ಗೆಂದು ಆಗಮಿಸಿದ್ದರು. ನಿಜು ಸೇರಿದಂತೆ ಇತರರಿಗೆ ಆಗುಂಬೆಯ ಮಿಥಿಲ ಹೋಂ ಸ್ಟೇನಲ್ಲಿ ಉಳಿದುಕೊಳ್ಳಲು ಚಿತ್ರತಂಡ ವ್ಯವಸ್ಥೆ ಮಾಡಿಕೊಟ್ಟಿತ್ತು. ನಿನ್ನೆ ರಾತ್ರಿ ಹೋಂಸ್ಟೇನಲ್ಲಿ ನಿಜು ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆಗ ತಕ್ಷಣವೇ ಅವರನ್ನು ಆಂಬ್ಯುಲೆನ್ಸ್ನಲ್ಲಿ ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ನಿಜು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಆಗುಂಬೆ ಪೊಲೀಸ್ ಠಾಣೆಯ ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಮೃತ ನಿಜು ಅವರ ಕುಟುಂಬಕ್ಕೆ ಮಾಹಿತಿ ನೀಡಿಲಾಗಿದೆ. ಅವರ ಕುಟುಂಬದವರು ತ್ರಿಶೂರ್ನಿಂದ ಹೊರಟಿದ್ದು, ತೀರ್ಥಹಳ್ಳಿಗೆ ಬಂದ ನಂತರ ದೂರು ಸ್ವೀಕರಿಸಿ ಮುಂದಿನ ಕ್ರಮವನ್ನು ಆಗುಂಬೆ ಪೊಲೀಸರು ಜರುಗಿಸಲಿದ್ದಾರೆ ಎಂದು ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ ಕಲಗುಜ್ಜಿ ತಿಳಿಸಿದ್ದಾರೆ.

ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಯ ಶವಗಾರದಲ್ಲಿ ನಿಜು ಶವವನ್ನು ಇಡಲಾಗಿದೆ. ಇನ್ನು, ಇದಕ್ಕೂ ಮೊದಲು ಕಾಂತಾರ-2 ಚಿತ್ರ ತಂಡದ ಇಬ್ಬರು ಕಲಾವಿದರು ಸಾವನ್ನಪ್ಪಿದ್ದರು.

Related Articles

Back to top button