ಶಿಕ್ಷಣ

ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ರಕ್ಷಕ-ಶಿಕ್ಷಕ ಸಭೆ

Views: 41

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಮೊದಲ ಪೋಷಕರ-ಶಿಕ್ಷಕರ ಸಭೆ ಜೂನ್ 14 ರಂದು ಶನಿವಾರ ನಡೆಸಲಾಯಿತು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಬಾಂಡ್ಯ ಎಜ್ಯುಕೇಶನ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಮಾತನಾಡಿ, ನಮ್ಮ ಸಂಸ್ಥೆ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸಂಪೂರ್ಣ ಬೆಳವಣಿಗೆಗೆ ಬೇಕಾದ ಎಲ್ಲಾ ರೀತಿಯ ಚಟುವಟಿಕೆಗಳನ್ನು ನೀಡುತ್ತಿದೆ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡುವುದು ನಮ್ಮ ಕರ್ತವ್ಯ ಮತ್ತು ಪೋಷಕರು ಸಾಧ್ಯವಾದಷ್ಟು ಮಕ್ಕಳ ಶೈಕ್ಷಣಿಕ ಚಟುವಟಿಕೆಗಳನ್ನು ಗಮನಿಸುವುದರ ಜೊತೆಗೆ ಜವಾಬ್ದಾರಿಯುತ ಪೋಷಕರಾಗಿ ಪ್ರತಿ ಹಂತದಲ್ಲಿ ಅವರನ್ನು ತಿದ್ದುವ ಕೆಲಸವನ್ನು ಮಾಡಿದಾಗ ಮಾತ್ರ ಆ ಮಗುವು ಮುಂದೆ ಸಮಾಜದಲ್ಲಿ ಉತ್ತಮ ಸತ್ಪ್ರಜೆಯಾಗಿ ಸಮಾಜವನ್ನು ಮುನ್ನಡೆಸಲು ಸಾಧ್ಯ ಎಂದು ತಿಳಿಸಿದರು.

ಗುರುಕುಲ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ಅವರು ಶೈಕ್ಷಣಿಕ ಸಾಲಿನ ಕಾರ್ಯ ಚಟುವಟಿಕೆಗಳು ಮತ್ತು ಮುಂದಿನ ವಾರ್ಷಿಕ ಯೋಜನೆಗಳನ್ನು ಸವಿಸ್ತಾರವಾಗಿ ಪೋಷಕರಿಗೆ ತಿಳಿಸಿದರು.

ಕಾರ್ಯಕ್ರಮವನ್ನು ಸಹ ಶಿಕ್ಷಕಿ ನಾಗರತ್ನ ನಿರೂಪಿಸಿ, ವಂದಿಸಿದರು.

Related Articles

Back to top button