ಕರಾವಳಿ
ಉತ್ತರ ಕನ್ನಡದಲ್ಲಿ ಮತ್ತೆ ಗುಡ್ಡ ಕುಸಿತ : ಕುಮಟಾ-ಶಿರಸಿ ಹೆದ್ದಾರಿ ಬಂದ್

Views: 77
ಕನ್ನಡ ಕರಾವಳಿ ಸುದ್ದಿ :ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಹೆಚ್ಚಾಗಿದೆ. ನಿರಂತರ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ, ಭೂಕುಸಿತ ಸಂಭವಿಸಿದೆ. ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ದ ಕುಸಿತ ಉಟಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೇವಿಮನೆ ಘಟ್ಟ ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಮತ್ತೆ ಗುಡ್ಡ ಕುಸಿದಿದೆ. ಭಾರಿ ಪ್ರಮಾಣದ ಮಣ್ಣು, ಮರಗಳು ರಸ್ತೆಯ ಮೇಲೆ ಬಿದ್ದಿದ್ದು, ಈ ಭಾಗದಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಕುಮಟಾ ಶಿರಸಿ ಹೆದ್ದಾರಿ ಸಂಪರ್ಕ ಸಂಪೂರ್ಣ ಕಡಿತವಾಗಿದೆ.
ಮುಂಜಾಗ್ರತಾ ಕ್ರಮವಾಗಿ ಬದಲಿ ಮಾರ್ಗದಲ್ಲಿ ಸಂಚರಿಸಲು ವಾಹನ ಸವಾರರಿಗೆ ಪೊಲೀಸರು ಸೂಚನೆ ನೀಡಿದ್ದಾರೆ. ಮಂಗಳೂರಿಗೆ ತೆರಳುವವರಿಗೆ ಬದಲಿ ಮಾರ್ಗದಲ್ಲಿ ಸಂಚಾರಕ್ಕೆ ಸೂಚನೆ ನೀಡಲಾಗಿದೆ. ಬಿದರಗೋಡು, ಆಗುಂಬೆ, ಉಡುಪಿ ಮಾರ್ಗದಲ್ಲಿ ಸಂಚರಿಸಲು ಪೊಲೀಸರು ಸವಾರರಿಗೆ ಸೂಚನೆ ನೀಡಿದ್ದಾರೆ.