ರಾಜಕೀಯ

ಬೈಂದೂರು:ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮತ್ತು ಹಕ್ಕು ಪತ್ರ ವಿತರಣೆ

Views: 113

ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲಾಡಳಿತ, ಬೈಂದೂರು ಮತ್ತು ಕುಂದಾಪುರ ತಾಲೂಕು ಆಡಳಿತ, ಬೈಂದೂರು ಪಟ್ಟಣ ಪಂಚಾಯತ್ ವತಿಯಿಂದ ರೋಟರಿ ಭವನದಲ್ಲಿ ನಡೆದ ಇಂದಿರಾ ಕ್ಯಾಂಟೀನ್ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರಗಳ ವಿತರಣೆ ಮತ್ತು ವಿವಿಧ ಸರ್ಕಾರಿ ಸವಲತ್ತುಗಳನ್ನು ವಿತರಿಸಲಾಯಿತು.

ಸಮಾರಂಭದಲ್ಲಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕೊಡವೂರು, ಮಾಜಿ ಶಾಸಕರಾದ ಗೋಪಾಲ್ ಪೂಜಾರಿ, ನಾಗರಾಜ ಗಾಣಿಗ, ಸದಾಶಿವ.ಡಿ, ಮೋಹನ್ ಪೂಜಾರಿ, ರಾಜು ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ, ಉಪ ವಿಭಾಗಧಿಕಾರಿ ರಶ್ಮಿ ಎಸ್.ಆರ್, ತಹಶಿಲ್ದಾರರಾದ ಪ್ರದೀಪ್ ಕುರುಡೇಕರ್, ಎಚ್.ರಾಮಚಂದ್ರಪ್ಪ, ಪಟ್ಟಣ ಪಂಚಾಯತ್ ಅಜಯ ಭಂಡಾರಕರ್ ಉಪಸ್ಥಿತರಿದ್ದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್, ಬಡವರಿಗೆ ಕಡಿಮೆ ದುಡ್ಡಿನಲ್ಲಿ ಪೌಷ್ಟಿಕ ಆಹಾರ ನೀಡುವ‌ ಉದ್ದೇಶದಿಂದ ಈ ಕ್ಯಾಂಟೀನ್ ಆರಂಭಿಸಲಾಯಿತು. ಐದು ರೂಪಾಯಿಗೆ ತಿಂಡಿ, ಹತ್ತು ರೂಪಾಯಿಗೆ ಮಧ್ಯಾಹ್ನದ ಊಟ, ಇಷ್ಟು ಕಡಿಮೆ ದುಡ್ಡಿನ ಲ್ಲಿ‌ ಹೊಟ್ಟೆ ತುಂಬಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.

ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಮಹಿಳೆಯರಿಗೆ ಸ್ವಾಭಿಮಾನದ ಬದುಕು ಸಾಗಿಸಲು ಹೊಲಿಗೆ ಯಂತ್ರವನ್ನು ವಿತರಿಸಲಾಯಿತು.

Related Articles

Back to top button