ರಾಜಕೀಯ
ವಿದೇಶ ಪ್ರವಾಸದಿಂದ ಮೋದಿ ಮರಳಿದ ಕೂಡಲೇ ಕೇಂದ್ರ ಸಚಿವ ಸಂಪುಟ ಪುನಾರಚನೆ

Views: 0
ಈ ವರ್ಷದ ಅಂತ್ಯಕ್ಕೆ ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಕ್ಷಕ್ಕೆ ಹೊಸ ವರ್ಚಸ್ಸು ತುಂಬಲು ಮುಂದಾಗಿರುವ ಕೇಂದ್ರ ಸರ್ಕಾರ ಸದ್ಯದಲ್ಲೇ ಸಚಿವ ಸಂಪುಟ ಪುನಾರಚಣೆ ಮಾಡುವ ಸಾಧ್ಯತೆ ಇದೆ. ಎಂದು ತಿಳಿದು ಬಂದಿದೆ.
ಕರ್ನಾಟಕ ವಿಧಾನಸಭೆ ಪಲಿತಾಂಶದ ಹಿನ್ನೆಲೆಯಲ್ಲಿ ಬಿಜೆಪಿ ಒಳಗೆ ಮಹತ್ವದ ಬದಲಾವಣೆ ನಿರೀಕ್ಷಿಸಲಾಗಿದೆ. ಪ್ರಧಾನಿ ಮೋದಿ ಅವರು ಅಮೆರಿಕ ಪ್ರವಾಸದಿಂದ ಹಿಂದುರುಗಿದ ನಂತರ ಕೇಂದ್ರ ಸಚಿವ ಸಂಪುಟದ ಪುನರಚನೆಯೊಂದಿಗೆ ಕರ್ನಾಟಕದ ವಿರೋಧ ಪಕ್ಷದ ನಾಯಕ ರಾಜ್ಯ ಅಧ್ಯಕ್ಷನ ಆಯ್ಕೆ ನಡೆಯಲಿದೆ. ಈ ಸಂಬಂಧವಾಗಿ ಅಮಿತ್ ಶಾ ಜೆ.ಪಿ. ನಡ್ದಾ ಮತ್ತು ಬಿ .ಎಲ್. ಸಂತೋಷ್ ಸೇರಿದಂತೆ ಪಕ್ಷದ ನಾಯಕರು ಮಹತ್ವದ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.






