ಇತರೆ

ಕುಂದಾಪುರ:ಶಂಕರನಾರಾಯಣದಲ್ಲಿ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ,8 ಮಂದಿ ವಶಕ್ಕೆ 

Views: 134

ಕುಂದಾಪುರ ತಾಲೂಕಿನ ಶಂಕರನಾರಾಯಣ ಸಮೀಪ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿರುವಾಗ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ 8 ಮಂದಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ರೋಹಿತ್ ಶೆಟ್ಟಿ, ಚರಣ್ ರಾಜ್ , ದಿನೇಶ್ ರಾವ್, ಅರ್ಜುನ್, ಮಂಜುನಾಥ್, ಪ್ರಶಾಂತ, ದಯಾನಂದ ಪೂಜಾರಿ , ಸಂತೋಷ ಶೆಟ್ಟಿ ಎಂದು ಗುರುತಿಸಲಾಗಿದೆ.

ಪೊಲೀಸರು ಕೋಳಿ ಅಂಕಕ್ಕೆ ‌ಬಳಸಲಾದ ಕೋಳಿಗಳು ಹಾಗೂ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related Articles

Back to top button