ಮಾಹಿತಿ ತಂತ್ರಜ್ಞಾನ

ಕುಂದಾಪುರ: ಮೊಬೈಲ್ ಹ್ಯಾಕ್ ಮಾಡಿ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ

Views: 411

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ವಂಡ್ಸೆ ವ್ಯಕ್ತಿಯೊಬ್ಬರಿಗೆ ಮೊಬೈಲ್ ಹ್ಯಾಕ್ ಮಾಡಿ ಬ್ಯಾಂಕ್ ಖಾತೆಯಿಂದ  1ಲಕ್ಷ ರೂ. ಹಣವನ್ನು ಮೋಸದಿಂದ ಲಪಟಾಯಿಸಿದ್ದಾರೆ.

ವಂಡ್ಸೆ ನಿವಾಸಿ ನಾರಾಯಣ ಶೆಟ್ಟಿ ಅವರಿಗೆ  ಸೆ.17ರಂದು ಮೊಬೈಲ್‌ಗೆ ಬಂದ ಕರೆಯನ್ನು ಸ್ವೀಕರಿಸಿದಾಗ ರಾಹುಲ್ ಎಂಬಾತ ಹಿಂದಿಯಲ್ಲಿ ಮಾತನಾಡಿದ್ದು, ರಾಂಗ್ ನಂಬರ್ ಎಂದು ಕರೆ ಕಟ್ ಮಾಡಲಾಗಿತ್ತು. ಬಳಿಕ ಮೊಬೈಲ್ ಗೆ ಓಟಿಪಿ ನಂಬ್ರವಿರುವ ಮೆಸೆಜ್ ಬಂದಿತ್ತು. ಅನುಮಾನಗೊಂಡು ಬ್ಯಾಂಕ್ ಖಾತೆ ಪರಿಶೀಲಿಸಿ ದಾಗ ಕೇವಲ 54. ಇರುವುದಾಗಿ ಕಂಡುಬಂದಿದೆ. ಖಾತೆಯಲ್ಲಿದ್ದ 1.27ಲಕ್ಷ ಹಣದಲ್ಲಿ 54 ರೂ.ಬಿಟ್ಟು ಉಳಿದ ಹಣ ಬೇರೆಯ ವರ ಬ್ಯಾಂಕ್ ಖಾತೆಗೆ ವರ್ಗಾವಣೆಗೊಂಡಿತ್ತು. 1930 ನಂಬ್ರಕ್ಕೆ ಫೋನ್ ಮಾಡಿದ ಬಳಿಕ 27000 ರೂ. ಹಣ ಖಾತೆಗೆ ಮರು ಜಮೆಯಾಗಿದೆ.

ಎಸ್ ಡಿಸಿಸಿ ಬ್ಯಾಂಕ್‌ನಲ್ಲಿರುವ ತಂದೆ ಅವರ ಖಾತೆಗೆ ನನ್ನ ಮೊಬೈಲ್ ಲಿಂಕ್ ಆಗಿದ್ದು ರಾಹುಲ್ ಹೆಸರಿನ ವ್ಯಕ್ತಿ 9008081056 ನಂಬ್ರದಿಂದ ಕರೆ ಮಾಡಿ ನನ್ನ ಮೊಬೈಲ್ ಹ್ಯಾಕ್ ಮಾಡಿ 1ಲಕ್ಷ ರೂ. ಹಣವನ್ನು ಮೋಸದಿಂದ ಲಪಟಾಯಿಸಿದ್ದಾನೆ ಎಂದು ಅರುಣ್‌ ಕುಮಾರ ಶೆಟ್ಟಿ ನೀಡಿದ ದೂರಿನಂತೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!