ಇತರೆ
ಉಡುಪಿ: ಗಾರೆ ಕೆಲಸಕ್ಕೆ ಬಂದ ಅಣ್ಣ, ಪ್ರಥಮ ಪಿಯುಸಿ ಓದುತ್ತಿದ್ದ ತಂಗಿ ಇಬ್ಬರೂ ಆತ್ಮಹತ್ಯೆಗೆ ಶರಣು
Views: 330
ಕನ್ನಡ ಕರಾವಳಿ ಸುದ್ದಿ: ಉಡುಪಿಯ ಪ್ರತಿಷ್ಠಿತ ಸರ್ಕಾರಿ ಕಾಲೇಜಿನಲ್ಲಿ ಪವಿತ್ರಾ ಪ್ರಥಮ ಪಿಯುಸಿ ಓದುತ್ತಿದ್ದರು. ಸಹೋದರ ಸಂಬಂಧಿ ಮಲ್ಲೇಶ ವಾರದ ಹಿಂದಷ್ಟೇ ಗಾರೆ ಕೆಲಸಕ್ಕೆ ಎಂದು ಉಡುಪಿಗೆ ಬಂದಿದ್ದ. ತನ್ನ ತಾಯಿ ಮತ್ತು ಪವಿತ್ರಾ ತಾಯಿ ಹನುಮವ್ವ ಅಕ್ಕ-ತಂಗಿಯಾಗಿರುವ ಕಾರಣ ಚಿಕ್ಕಮ್ಮನ ಮನೆಯಲ್ಲೇ ಉಳಿದುಕೊಂಡಿದ್ದ. ಹನುಮವ್ವ ರಾಯಚೂರಿಗೆ ಹೋಗಿದ್ದ ಸಂದರ್ಭ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆದಿದೆ.






