ಶಿಕ್ಷಣ

ಕೋಟ- ಪಡುಕರೆ: ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ಸಿದ್ದತೆ ಕಾರ್ಯಾಗಾರ

Views: 36

ಕನ್ನಡ ಕರಾವಳಿ ಸುದ್ದಿ: ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸೂಕ್ತ ಮಾರ್ಗದರ್ಶನದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸಿ ಅವರಿಗೆ ಉಜ್ವಲ ಭವಿಷ್ಯ ನೀಡುವ ಜವಾಬ್ದಾರಿ ಎಲ್ಲಾ ಶಿಕ್ಷಣ ಸಂಸ್ದೆಗಳಿಗೆ ಇದೆ ಎಂದು ಕುಂದಾಪುರ ಸ್ಪರ್ಧಾ ಸಾರಥಿ ಸಂಸ್ಥೆಯ ಸಂಸ್ಥಾಪಕರಾದ ಆದರ್ಶ ಕೆಲ ಹೇಳಿದರು.

ಅವರು ಕೋಟ- ಪಡುಕರೆ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಮತ್ತು ಸ್ಥಾನೀಕರಣ ಘಟಕದ ಸಹಬಾಗಿತ್ವದಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ಸಿದ್ಧತೆ ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿ ಸಾಂಕೇತಿಕವಾಗಿ ಪರೀಕ್ಷೆಯನ್ನು ನಡೆಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಜೇಂದ್ರ ಎಸ್. ನಾಯಕ್, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದು, ನಿರಂತರ ಪ್ರಯತ್ನದಿಂದ ಉನ್ನತ ಸರ್ಕಾರಿ ಹುದ್ಧೆಗಳಿಗೆ ನೇಮಕಗೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಆಧಿಕಾರಿಗಳು ಪ್ರೊ. ರಮೇಶ ಆಚಾರ್ ಉಪಸ್ಥಿತರಿದ್ದರು.ಆಂತರಿಕ ಗುಣಮಟ್ಟ ಭರವಸಾ ಕೋಶ ಸಂಚಾಲಕರಾದ ಪ್ರೊ. ಸುಬ್ರಹ್ಮಣ್ಯ ಅವರು ಕಾರ್ಯಕ್ರಮ ಸಂಘಟಿಸಿದರು.   

Related Articles

Back to top button
error: Content is protected !!