ಇತರೆ

ಕುಂದಾಪುರ:ತಲ್ಲೂರು ಪೇಟೆಯಲ್ಲಿ ಹಾಡಹಗಲೇ ಕಾರಿನ ಗಾಜು ಒಡೆದು 2 ಲಕ್ಷ ರೂಪಾಯಿ ಕಳ್ಳತನ

Views: 105

ಕನ್ನಡ ಕರಾವಳಿ ಸುದ್ದಿ: ತಲ್ಲೂರು ಪೇಟೆಯಲ್ಲಿ ಹಾಡಹಗಲೇ ಕಾರಿನ ಕಿಟಕಿ ಗಾಜು ಒಡೆದು 2 ಲ. ರೂಪಾಯಿ ಕಳ್ಳತನ ನಡೆದ ಕುರಿತು ಪ್ರಕರಣ ದಾಖಲಾಗಿದೆ.

ಕೆಂಚನೂರು ಗ್ರಾಮದ ಕೆ. ಗುಂಡು ಶೆಟ್ಟಿ ಅವರು ತಲ್ಲೂರು  ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್‌ಗೆ ಹೋಗಿ 2,50,000 ರೂ. ನಗದನ್ನು ಡ್ರಾ ಮಾಡಿಕೊಂಡಿದ್ದರು. 2 ಲಕ್ಷ ರೂ.ಗಳನ್ನು ಕಾರಿನ ಡ್ಯಾಶ್ ಬೋರ್ಡ್ ನಲ್ಲಿಟ್ಟಿದ್ದರು. ಕಾರನ್ನು ತಲ್ಲೂರಿನ ಎಂಡಿ ಫ್ಲ್ಯಾಟ್‌ ನ ಎದುರು ಮುಖ್ಯರಸ್ತೆ ಬದಿಯಲ್ಲಿ ಕಾರನ್ನು ನಿಲ್ಲಿಸಿ ಅದೇ ಫ್ಲಾಟ್‌ನಲ್ಲಿರುವ ಮನೆಗೆ ಹೋಗಿದ್ದರು. ಸಂಜೆ ಕಾರಿನ ಬಳಿ ಬಂದಾಗ ಎಡಬದಿಯ ಬಾಗಿಲ ಗಾಜು ಒಡೆದಿರುವುದು ಕಂಡುಬಂತು. ಬಾಗಿಲು ತೆರೆದು ನೋಡಿದಾಗ ಡ್ಯಾಶ್‌ ಬೋರ್ಡ್‌ನಲ್ಲಿಟ್ಟಿದ್ದ ನಗದು ಕಳವಾಗಿತ್ತು. ಪ್ರಕರಣ ದಾಖಲಾಗಿದೆ

Related Articles

Back to top button
error: Content is protected !!