ಶಿಕ್ಷಣ

ಗುಂಡು ಎಸೆತದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಸೂರ್ಯಪ್ರಕಾಶ್  ಚಿನ್ನದ ಪದಕ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ

Views: 104

ಕನ್ನಡ ಕರಾವಳಿ ಸುದ್ದಿ: ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಸೂರ್ಯಪ್ರಕಾಶ್ ಬುಧವಾರ ನಡೆದ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ – 2025ರ ಗುಂಡು ಎಸೆತ ಸ್ಪರ್ಧೆಯ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಗಳಿಸಿದ್ದಾನೆ.

ಈ ಗೆಲುವಿನೊಂದಿಗೆ, ಹಾಸನದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ. ವಿಜೇತ ವಿದ್ಯಾರ್ಥಿಯು ಕಾಳಾವರ ಭಾಸ್ಕರ ರಾಮ ಗಾಣಿಗ ಮತ್ತು ವಿಜಯಲಕ್ಷ್ಮಿ ದಂಪತಿಯ ಪುತ್ರ.

ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಹೆಮ್ಮಾಡಿ  ಜನತಾ ಪದವಿ ಪೂರ್ವ ಕಾಲೇಜು, ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟ ನಡೆಯಿತು.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ಅವರು ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿದ್ದರು ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

Related Articles

Back to top button