ಜನಮನ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯಾದ್ಯಂತ ಮಳೆ ಸಾಧ್ಯತೆ
Views: 239
ಕನ್ನಡ ಕರಾವಳಿ ಸುದ್ದಿ:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಮಳೆ ಮತ್ತೆ ಚುರುಕಾಗುವ ನಿರೀಕ್ಷೆಯಿದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.
ಈಗಿರುವ ಹವಾಮಾನ ಸ್ಥಿತಿಯಲ್ಲಿ ನೈಋತ್ಯ ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿಯಲ್ಲಿದ್ದ ವಾಯುಭಾರ ಕುಸಿತವು ಪ್ರಸ್ತುತ ಕೊಮೊರಿಯನ್ ಪ್ರದೇಶದ ಮೇಲೆ ಕೇಂದ್ರೀಕೃತವಾಗಿದೆ. ಹೀಗಾಗಿ ದಕ್ಷಿಣ ಒಳನಾಡಿನ ಕೆಲವೆಡೆ ನ.18 ರಿಂದ 22 ರವರೆಗೆ ಮಳೆಯಾಗಲಿದೆ. ವಾಯುಭಾರ ಕುಸಿತದ ಪ್ರಭಾವದಿಂದ ಈ ಮೂರು ದಿನಗಳಲ್ಲಿ ರಾಜ್ಯದ ಹಲವೆಡೆ ಮಳೆ ನಿರೀಕ್ಷಿಸಲಾಗಿದೆ.






