ಕನ್ನಡ ಕರಾವಳಿ ಸುದ್ದಿ: ಗುರು ಅಬಾಕಸ್ ಮತ್ತು ವೇದಿಕ್ ಮ್ಯಾತ್ಸ್ ಸೆಂಟರ್ ಪುಣೆ,ಮಹಾರಾಷ್ಟ್ರ ಇದರ ವತಿಯಿಂದ ಇತ್ತೀಚೆಗೆ ಆಯೋಜಿಸಲಾದ ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮ್ಯಾತ್ಸ್ ಪರೀಕ್ಷೆಯಲ್ಲಿ ಶಂಕರನಾರಾಯಣದ ಮದರ್ ತೆರೇಸಾ ಶಾಲೆಯ 7 ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿ ಸುಹಾನ್ ವಿ ಭಟ್ ಇವರಿಗೆ ಬೆಳ್ಳಿಯ ಪದಕ ಲಭಿಸಿದೆ.ಹಾಗೆಯೇ 7ನೇ ತರಗತಿಯ ಸೃಜನ್ ಇವರಿಗೆ ಕಂಚಿನ ಪದಕ ದೊರಕಿದೆ.
ಸಾಧಕ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ , ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿ ಉಜ್ವಲ ಭವಿಷ್ಯ ಹಾರೈಸಿದ್ದಾರೆ.