ಧಾರ್ಮಿಕ
ಕೇಂದ್ರ ಸಹಾಯಕ ಸಚಿವ ಶ್ರೀ ಸುರೇಶಗೋಪಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ
Views: 110
ಕನ್ನಡ ಕರಾವಳಿ ಸುದ್ದಿ: ಕೇಂದ್ರ ಸರ್ಕಾರದ ಸಹಾಯಕ ಸಚಿವ ಶ್ರೀ ಸುರೇಶಗೋಪಿ ಕುಟುಂಬರೊಂದಿಗೆ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು.
ಸಚಿವರನ್ನು ವಾದ್ಯ ಗೋಷ್ಠಿಗಳೊಂದಿಗೆ ಆಡಳಿತ ಮೊಕ್ತೇಸರರಾದ ಶ್ರೀರಮಣ ಉಪಾಧ್ಯಾಯರು ಹಾಗು ಪರ್ಯಾಯ ಅರ್ಚಕರಾದ ಶ್ರೀ ವ್ಯಾಸ ಉಪಾಧ್ಯಾಯ ಸಹೋದರರು ಆದರದಿಂದ ಬರಮಾಡಿಕೊಂಡು ವಿಶೇಷ ಗೌರವ ಪ್ರಸಾದವನ್ನು ನೀಡಿದರು.
ವಿಶ್ರಾಂತ ಆಡಳಿತ ಮೊಕ್ತೇಸರರಾದ ಶ್ರೀ ಸೂರ್ಯನಾರಾಯಣುಪಾಧ್ಯಾಯರು, ಆಡಳಿತ ಮಂಡಳಿ ಸದಸ್ಯರು, ಅರ್ಚಕ ಸಿಬ್ಬಂದಿ, ಭಕ್ತಾದಿಗಳು ಉಪಸ್ಥಿತರಿದ್ದರು.
.






