ಕನ್ನಡ ಕರಾವಳಿ ಸುದ್ದಿ: ಮಿಯಾರು ಜೋಡುಕಟ್ಟೆ ಬಲಿಪರ ನಿವಾಸಿ ಕಾರ್ಕಳ ಗಾಂಧಿ ಮೈದಾನದ ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನದ ಆಡಳಿತ ಮೊಕೇಸರರಾದ ಜನಾರ್ದನ ಶೆಟ್ಟಿಗಾರ್ (81) ಅವರು ಜ. 18ರಂದು ನಿಧನ ಹೊಂದಿದರು. ಮೃತರು ಪತ್ನಿ ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಅವರು 35 ವರ್ಷಗಳಿಂದ ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದರು. ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.