ಇತರೆ

ಒಳ ಉಡುಪಿನಲ್ಲಿಟ್ಟು ಪರಪ್ಪನ ಅಗ್ರಹಾರ ಜೈಲು ಕೈದಿಗಳಿಗೆ ಗಾಂಜಾ ಸಾಗಿಸುತ್ತಿದ್ದ ವಾರ್ಡನ್ ಅರೆಸ್ಟ್

Views: 21

ಕನ್ನಡ ಕರಾವಳಿ ಸುದ್ದಿ: ಹಲವು ತಿಂಗಳುಗಳಿಂದ ಒಂದಲ್ಲಾ ಅಕ್ರಮಗಳಿಂದ ಒಂದು ರೀತಿಯ ಸುದ್ದಿಯಾಗುತ್ತಿರುವ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಗಾಂಜಾ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದೆ. ಜೈಲಿನಲ್ಲಿರುವ ಆರೋಪಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಜೈಲು ವಾರ್ಡನ್ ಪ್ರಕಾಶ್ ಗಾವಡೆ ಅವರನ್ನು ಬಂಧಿಸಲಾಗಿದೆ.

ಮಾರ್ಚ್ 9 ರಂದು ರಾತ್ರಿ ಸುಮಾರು 8.15ರ ಸುಮಾರಿಗೆ ಈ ಘಟನೆ ನಡೆದಿದೆ. ಆ ದಿನ ನಿಯೋಜನೆಗೊಂಡಿದ್ದ ವಾರ್ಡನ್ ಪ್ರಕಾಶ್ ಗಾವಡೆ ಜೈಲಿನೊಳಗೆ ಪ್ರವೇಶಿಸುವ ವೇಳೆ ತಪಾಸಣೆ ವಿಭಾಗ-2ರಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಅವನನ್ನು ಪರಿಶೀಲನೆಗೆ ಒಳಪಡಿಸಿದರು. ಈ ವೇಳೆ ಅವನ ಒಳ ಉಡುಪಿನಲ್ಲಿ ಹಣ ಮತ್ತು ಕಪ್ಪು ಟೇಪ್ನೊಂದರಲ್ಲಿ ಸುತ್ತಿದ ಒಂದು ಪೊಟ್ಟಣ ಪತ್ತೆಯಾಯಿತು. ಅನುಮಾನಗೊಂಡ ಸಿಬ್ಬಂದಿ ಅದನ್ನು ತೆರಳಿ ಪರಿಶೀಲಿಸಿದಾಗ ಅದರೊಳಗೆ ಗಾಂಜಾ ಇರುವುದನ್ನು ಕಂಡುಬಂದಿದೆ.

ಪ್ರಕಾಶ್ ಗಾವಡೆ ಕೆಎಸ್‌ಐಎಸ್‌ಎಫ್‌ ಸಿಬ್ಬಂದಿಯ ಕಣ್ಣು ತಪ್ಪಿಸಿ ಗಾಂಜಾ ಜೈಲಿನೊಳಗೆ ಸಾಗಿಸಲು ಯತ್ನಿಸುತ್ತಿದ್ದ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಬಳಿಕ ಅವನನ್ನು ವಶಕ್ಕೆ ಪಡೆದ ಜೈಲು ಅಧಿಕಾರಿಗಳು ಪರಪ್ಪನ ಅಗ್ರಹಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಜೈಲಿನಲ್ಲಿರುವ ಕೊಲೆ ಪ್ರಕರಣದ ಆರೋಪಿಯೊಬ್ಬನು ಪ್ರಕಾಶ್‌ಗೆ ಕರೆ ಮಾಡಿ ಗಾಂಜಾ ತಂದುಕೊಡಲು ಸೂಚಿಸಿದ್ದಾನೆ ಎಂಬ ಮಾಹಿತಿ ಹೊರಬಂದಿದೆ. ಹೊರಗಿನಿಂದ ಗಾಂಜಾ ತಂದು ಜೈಲಿನೊಳಗೆ ತಲುಪಿಸಿದರೆ ಹತ್ತು ಸಾವಿರ ರೂಪಾಯಿ ನೀಡುವುದಾಗಿ ಆ ಆರೋಪಿ ಹೇಳಿದ್ದಾನೆ. ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.ಕಳೆದ ಡಿಸೆಂಬರ್‌ನಲ್ಲಿ ಪರಪ್ಪನ ಆಗ್ರಹಾರ ಜೈಲಿನಲ್ಲಿ ಮಿಂಚಿನ ಸಂಚಾರ ನಡೆಸಿದ್ದ ಡಿಜಿಪಿ, ಆಡುಗೆ ಮನೆ, ಆಸ್ಪತ್ರೆಗೂ ವಿಸಿಟ್ ಮಾಡಿದ್ದರು. ವೈದ್ಯರು ಚಿಕಿತ್ಸೆ ಮಾತ್ರ ಕೋಡಬೇಕು. ಅದನ್ನು ಬಿಟ್ಟು ಮೊಬೈಲ್, ಗಾಂಜಾ ಸಾಗಾಣೆ ಮಾಡಿದ್ರೆ ಕ್ರಮ ಕೈಗೊಳ್ಳಲಾಗುತ್ತೆ ಎಂದು ನೇರವಾಗಿ ಹೇಳಿದ್ದರು. ಅಡುಗೆ ಮನೆಯ ಸಿಬ್ಬಂದಿಗೂ ಎಚ್ಚರಿಸಿದ್ದರು. ಇವೆಲ್ಲದರ ನಡುವೆ ಮತ್ತೊಮ್ಮೆ ಇಂತಹ ಅಕ್ರಮಗಳು ಜೈಲಿನಲ್ಲಿ ನಡೆಯುತ್ತಿರುವುದು ಆತಂಕ ಸೃಷ್ಟಿಸಿದೆ.

Related Articles

Back to top button
error: Content is protected !!