ಇತರೆ

ತಾಯಿಯ ಅಕ್ರಮ ಸಂಬಂಧ ಪ್ರಶ್ನಿಸಲು ಹೋದ ಅಪ್ರಾಪ್ತ ಬಾಲಕನಿಂದ ಅಕ್ಕ ಮತ್ತು ತಮ್ಮನ ಹತ್ಯೆ

Views: 131

ಕನ್ನಡ ಕರಾವಳಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಜೋಡಿ ಕೊಲೆ ನಡೆದಿದ್ದು, ಅಪ್ರಾಪ್ತ ಬಾಲಕನೇ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಗುರುವಾರ ನಡೆದಿದೆ.

ಬೆಂಗಳೂರಿನ ಪೀಣ್ಯದ ಎಚ್ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕ, ತನ್ನ ತಾಯಿಯ ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ, ಅಕ್ಕ ಮತ್ತು ತಮ್ಮನನ್ನು ಹತ್ಯೆ ಮಾಡಿದ್ದಾನೆ.

ಕೊಲೆಯಾದವರನ್ನು ಯಮುನಾ(36) ಮತ್ತು ಸುದೀಪ್(34) ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಡಿಸಿಪಿ ನಾಗೇಶ್ ಮತ್ತು ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಆರೋಪಿ ಬಾಲಕನ ತಾಯಿ ಛಾಯಾ ಹಾಗೂ ಕೊಲೆಯಾದ ಯುಮುನಾ ಗಂಡನ ಮಧ್ಯೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದ್ದು, ಇದನ್ನು ಪ್ರಶ್ನಿಸಲು ಛಾಯಾ ಮನೆಗೆ ಬಂದಿದ್ದ ಯಮುನಾ ಮತ್ತು ತಮ್ಮ ಸುದೀಪ್ ಜಗಳವಾಡುತ್ತಿದ್ದರು. ಈ ಜಗಳದ ಮಧ್ಯೆ ಎಂಟ್ರಿಯಾದ ಛಾಯಾ ಪುತ್ರ ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆ ಮಾಡಿದ್ದಾನೆ.

ಅಪ್ರಾಪ್ತ ಬಾಲಕ ಇಬ್ಬರಿಗೂ ಹತ್ತಾರು ಬಾರಿ ಚಾಕುವಿನಿಂದ ಇರಿದಿದ್ದಾನೆ. ನಂತರ ಕೋಣೆ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದು, ಪೊಲೀಸರು ಬಂದರೂ ಬಾಗಿಲು ತೆಗೆದಿರಲಿಲ್ಲ. ನಂತರ ತಂದೆ ಬಂದು ಹೇಳಿದಾಗ ಬಾಗಿಲು ತೆಗೆದು ಅಪ್ರಾಪ್ತ ಹೊರಬಂದಿದ್ದಾನೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ

Related Articles

Back to top button
error: Content is protected !!