ರಾಜಕೀಯ
ಏಕರೂಪ ನಾಗರಿಕ ಸಂಹಿತೆ ಜಾರಿಯಾದರೆ ಎನ್ ಡಿಎ ತೊರೆಯುತ್ತೇವೆ:ಮಿಜೋರಾಂ ಮುಖ್ಯಮಂತ್ರಿ

Views: 0
ಏಕರೂಪ ನಾಗರಿಕ ಸಂಹಿತೆ ಜಾರಿಯಾದರೆ ಮಿಜೋರಾಂ ನ್ಯಾಷನಲ್ ಫ್ರೆಂಟ್ ಪಕ್ಷವು ಬಿಜೆಪಿ ನೇತೃತ್ವದ ಎನ್ ಡಿಎ ತೊರೆಯಲಿದೆ ಎಂದು ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ಎಚ್ಚರಿಕೆ ನೀಡಿದ್ದಾರೆ.
ಎಲ್ಲಾ ಸಮುದಾಯಗಳಿಗೆ ಒಂದೇ ವಯಕ್ತಿಕ ಕಾನೂನುಗಳನ್ನು ರೂಪಿಸುವ ಉದ್ದೇಶದಿಂದ ಏಕರೂಪ ನಾಗರಿಕ ಸಂಹಿತೆಯ ಅನುಷ್ಠಾನಕ್ಕೆ ಕೇಂದ್ರ ಸಿದ್ಧತೆ ಮಾಡಿಕೊಂಡಿದೆ.
ವೈಯಕ್ತಿಕ ಕಾನೂನಿನ ಅಡಿಯಲ್ಲಿ ಮದುವೆ, ,ವಿಚ್ಛೇದನ ,ಮತ್ತು ಉತ್ತರಾಧಿಕಾರದ ಹಕ್ಕುಗಳನ್ನು ಸಾಮಾನ್ಯವಾಗಿ ನಿರಾಕರಿಸಿರುವ ಮಹಿಳೆಯರಿಗೆ ಸಮಾನತೆ ಮತ್ತು ನ್ಯಾಯವನ್ನು ನೀಡುವ ಉದ್ದೇಶದಿಂದ ಏಕರೂಪ ನಾಗರಿಕ ಸಂಹಿತೆ ಜಾರಿಯ ಚಿಂತನೆ ಇದೆ ಎಂದು ಬಿಜೆಪಿ ಹೇಳುತ್ತಲೇ ಇದೆ.
ಈಶಾನ್ಯ ರಾಜ್ಯಗಳು ಈ ಏಕರೂಪ ನಾಗರಿಕ ಸಂಹಿತೆಯನ್ನು ಬಲವಾಗಿ ವಿರೋಧಿಸುತ್ತದೆ.
ಬಿಜೆಪಿ ಮೈತ್ರಿಕೂಟಕ್ಕೆ ಬೆಂಬಲಿಸುತ್ತೇವೆ ಎಂದ ಮಾತ್ರಕ್ಕೆ ಎಲ್ಲಾ ವಿಷಯಗಳನ್ನು ಪಾಲಿಸಬೇಕೆಂಬುದಿಲ್ಲ ಬಿಜೆಪಿಯ ಎಲ್ಲಾ ನೀತಿಗಳನ್ನು ತಮ್ಮ ಪಕ್ಷವು ಒಪ್ಪಿಕೊಳ್ಳುವುದಿಲ್ಲ ಎಂದರು






