ಧಾರ್ಮಿಕ
ಬಾರಕೂರು: ಅರ್ಚಕ ಸುಬ್ರಹ್ಮಣ್ಯ ಉಂಗ್ರಪಳ್ಳಿ ನಿಧನ
Views: 120
ಕನ್ನಡ ಕರಾವಳಿ ಸುದ್ದಿ: ಬಾರಕೂರು ಸಮೀಪ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸುಬ್ರಹ್ಮಣ್ಯ ಉಂಗ್ರಪಳ್ಳಿ(71) ರವಿವಾರ ರಾತ್ರಿ ಮೃತಪಟ್ಟಿದ್ದಾರೆ.
ಮೃತರು ಪತ್ನಿ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಸುಬ್ರಹ್ಮಣ್ಯ ಉಂಗ್ರಪಳ್ಳಿ ಅವರು ಮಟಪಾಡಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ಭಜನ ಮಂಡಳಿ ನೇತೃತ್ವದಲ್ಲಿ ಹಲವು ವರ್ಷಗಳಿಂದ ಕುಣಿತ ಭಜನೆ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಬಾರಕೂರು ಮಣಿಗಾರಕೇರಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.







