ಶಿಕ್ಷಣ

ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ,” ಅನುಭವಾತ್ಮಾಕ ಕಲಿಕೆ ಹಾಗೂ ತರಗತಿ ನಿರ್ವಹಣೆ ಕೌಶಲ್ಯ “ ವಿಶೇಷ ಕಾರ್ಯಗಾರ 

Views: 213

ಕನ್ನಡ ಕರಾವಳಿ ಸುದ್ದಿ: ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ” ಅನುಭವಾತ್ಮಕ ಕಲಿಕೆ ಹಾಗೂ ತರಗತಿ ನಿರ್ವಹಣೆ ಕೌಶಲ್ಯಗಳು “ ಎಂಬ ಒಂದು ದಿನದ ವಿಶೇಷ ಕಾರ್ಯಗಾರವನ್ನು ಮೇ.21ರಂದು ಹಮ್ಮಿಕೊಳ್ಳಲಾಗಿತ್ತು

ಬೆಂಗಳೂರಿನ ಏಕ್ತಾ ಸ್ಕೂಲಿನ ಸಂಸ್ಥಾಪಕ ಪ್ರಾಂಶುಪಾಲರು ಹಾಗೂ ಸಿಬಿಎಸ್ ಇ ಯ ಸಂಪನ್ಮೂಲ ವ್ಯಕ್ತಿಯಾದ ಡಾ. ಹೇಮಲತಾ ಖಾತ್ರಿಯವರು ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡುತ್ತಾ, ಅನುಭವಾತ್ಮಕ ಕಲಿಕೆಯು ವಿದ್ಯಾರ್ಥಿಗಳ ಸರ್ವಾಂಗೀಣ ಕಲಿಕೆಗೆ ಉತ್ತಮ ಮಾರ್ಗವಾಗಿದ್ದು, ಶಿಕ್ಷಕರು ಪ್ರಾಯೋಗಿಕವಾಗಿ ಬೋಧನಾ ತಂತ್ರಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಅರಿವಿನ ಮಟ್ಟವನ್ನು ಹೆಚ್ಚಿಸಬೇಕೆಂದರು . ಆಧುನಿಕ ಕಾಲದಲ್ಲಿ ಬಹುರೂಪಿ ಬೋಧನಾ ತಂತ್ರಜ್ಞಾನಗಳನ್ನು ನಾವು ಬಳೆಸಿಕೊಳ್ಳಬೇಕಾದ ಅಗತ್ಯತೆ ಇದೆ ಎಂದರು. 

ಬಾಂಡ್ಯ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಶ್ರೀಮತಿ ಅನುಪಮಾ, ಯಶ್ ಶೆಟ್ಟಿ ಅವರು ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಡಾ. ರೂಪಾ ಶೆಣೈರವರು ಕಾರ್ಯಗಾರಕ್ಕೆ ಶುಭ ಕೋರಿದರು. ಶಿಕ್ಷಕಿ ಕೀರ್ತಿ ಶೆಟ್ಟಿಯವರು ಅತಿಥಿಗಳ ಪರಿಚಯ ಮಾಡಿದರು. ಶಿಕ್ಷಕಿ ಸಂಪ್ರೀತಾರವರು ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Related Articles

Back to top button
error: Content is protected !!