ಇತರೆ

ಕೇರಳದಲ್ಲಿ ಮುಂಗಾರು ಪ್ರವೇಶ: ಕರ್ನಾಟಕದಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ!

Views: 94

ಕನ್ನಡ ಕರಾವಳಿ ಸುದ್ದಿ: ನೈಋತ್ಯ ಮುಂಗಾರು ಕೊನೆಗೂ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕೇರಳ ಪ್ರವೇಶಿಸಿದ ಬಳಿಕ ಮುಂದಿನ ಎರಡು ದಿನಗಳಲ್ಲಿ ಮುಂಗಾರು ಕರ್ನಾಟಕಕ್ಕೂ ಆಗಮಿಸುವ ನಿರೀಕ್ಷೆಯಿದೆ.

ಈ ಕುರಿತು ಮಾಹಿತಿ ನೀಡಿರುವ ಎನ್. ಪುವಿಯರಸನ್, ಮುಂಗಾರು ಪ್ರವೇಶಕ್ಕೆ ಅಗತ್ಯವಿರುವ ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ತಿಳಿಸಿದ್ದಾರೆ. ಗಾಳಿಯ ದಿಕ್ಕು, ವೇಗ ಹಾಗೂ ವಾತಾವರಣದಲ್ಲಿನ ವಿವಿಧ ಅಂಶಗಳು ಮುಂಗಾರು ಮುಂದುವರಿಯಲು ನೆರವಾಗುತ್ತಿವೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಗುರುವಾರ ಮುಂಗಾರು ಗಾಳಿಯ ವ್ಯಾಪ್ತಿಯನ್ನು ಪರಿಶೀಲಿಸಿದ ಬಳಿಕ ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.

ಇದರ ನಡುವೆಯೇ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮುಂದಿನ ಐದು ದಿನಗಳ ಕಾಲ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಗುಡುಗು, ಮಿಂಚು, ಬಿರುಗಾಳಿ ಹಾಗೂ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

 

Related Articles

Back to top button
error: Content is protected !!