ಇತರೆ

ಕೋಟ: ರಾಷ್ಟ್ರೀಯ ಹೆದ್ದಾರಿ ಮಧ್ಯೆ ಕತ್ತಿ ಬೀಸಿ ಹಲ್ಲೆಗೆ ಯತ್ನ, ಯುವಕನ ಹುಚ್ಚಾಟಕ್ಕೆ ಸಂಚಾರಕ್ಕೆ ಅಡ್ಡಿ! 

Views: 190

ಕನ್ನಡ ಕರಾವಳಿ ಸುದ್ದಿ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸಮೀಪ ಯುವಕನೊಬ್ಬ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ ಘಟನೆ ನಡೆದಿದೆ. ಹೆದ್ದಾರಿಯ ಮಧ್ಯೆ ಟೇಬಲ್ ಇಟ್ಟು, ಟಿವಿ ಹಾಗೂ ಮ್ಯೂಸಿಕ್ ವ್ಯವಸ್ಥೆ ಮಾಡಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದರಿಂದ ಕೆಲಕಾಲ ಸಂಚಾರದಲ್ಲಿ ಗೊಂದಲ ಉಂಟಾಯಿತು.

ಬೆಲ್ಲದ ಗಣಪತಿ ದೇವಸ್ಥಾನ ಸಮೀಪದ ನಿವಾಸಿ ರಂಜಿತ್ ಸೋಮಯಾಜಿ (25) ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಉದ್ದನೆಯ ತಲೆಕೂದಲು ಹಾಗೂ ಗಡ್ಡದೊಂದಿಗೆ ಹೆದ್ದಾರಿಯಲ್ಲೇ ವಿಚಿತ್ರವಾಗಿ ವರ್ತಿಸುತ್ತಿದ್ದ ಯುವಕನನ್ನು ಕಂಡು ವಾಹನ ಸವಾರರು ಮತ್ತು ಸ್ಥಳೀಯರು ಆತಂಕಗೊಂಡರು.

ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಕೋಟ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಈ ವೇಳೆ ಪೊಲೀಸರ ಮೇಲೆಯೇ ರಂಜಿತ್ ಕತ್ತಿ ಬೀಸಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು.

ಪ್ರಾಥಮಿಕ ವಿಚಾರಣೆಯಲ್ಲಿ ಆತ ಮಾನಸಿಕ ಅಸ್ವಸ್ಥನಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದರೂ, ಮಾನಸಿಕ ಚಿಕಿತ್ಸೆಗೆ ಸಂಬಂಧಿಸಿದ ಯಾವುದೇ ಅಧಿಕೃತ ದಾಖಲೆಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

Related Articles

Back to top button
error: Content is protected !!