ಕ್ರೀಡೆ
ಆಗಸ್ಟ್ 29 ರಾಷ್ಟ್ರೀಯ ಕ್ರೀಡಾ ದಿನದಂದು ನಿವೃತ್ತ ದೈಹಿಕ ಶಿಕ್ಷಣ ಉಪನ್ಯಾಸಕ ಶ್ರೀಧರ ಶೆಟ್ಟಿ ಕೊಕ್ಕರ್ಣೆಯವರಿಗೆ ಸನ್ಮಾನ
Views: 0
ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಉಡುಪಿ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನದ ಪ್ರಯುಕ್ತ ಆಗಸ್ಟ್ 29 ರಂದು ಸಂಜೆ 5 ಘಂಟೆಗೆ ನಿವೃತ್ತ ದೈಹಿಕ ಶಿಕ್ಷಣ ಉಪನ್ಯಾಸಕ ಹಾಗೂ ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ಕ್ರೀಡಾ ಸಂಯೋಜಕ ಶ್ರೀಧರ ಶೆಟ್ಟಿ ಕೊಕ್ಕರ್ಣೆಯವರನ್ನು ಅವರ ನಿವಾಸದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸುಕೇಶ ಶೆಟ್ಟಿ ಹೊಸಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ






