ರಾಜಕೀಯ

ಸಂವಿಧಾನ ಭಗವದ್ಗೀತೆ, ಕುರಾನ್, ಬೈಬಲ್‌ಗಿಂತ ಕಡಿಮೆಯಿಲ್ಲ: ಲೋಕಸಭೆಯಲ್ಲಿ ಅಧೀರ್ ಚೌಧರಿ

Views: 0

‘INDIA’ ಮತ್ತು ‘ಭಾರತ್’ ನಡುವೆ ಅನಗತ್ಯ ಬಿರುಕು ಮೂಡಿಸಲು ಪ್ರಯತ್ನಿಸಬಾರದು, ಏಕೆಂದರೆ ಭಾರತದ ಸಂವಿಧಾನದ ಪ್ರಕಾರ ಎರಡಕ್ಕೂ ಯಾವುದೇ ವ್ಯತ್ಯಾಸವಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಂಗಳವಾರ ಹೇಳಿದ್ದಾರೆ.

ಐದು ದಿನಗಳ ವಿಶೇಷ ಅಧಿವೇಶನದ ಎರಡನೇ ದಿನದಂದು ಲೋಕಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಚೌಧರಿ, ”ಸಂವಿಧಾನದ ಮುನ್ನುಡಿಯನ್ನು ಓದುತ್ತಾ, ಇದು ನಮಗೆ ಭಗವದ್ಗೀತೆ ಕುರಾನ್ ಮತ್ತು ಬೈಬಲ್‌ನಂತಹ ಪವಿತ್ರ ಗ್ರಂಥಗಳಿಗಿಂತ ಕಡಿಮೆಯಿಲ್ಲ” ಎಂದು ಹೇಳಿದರು.

”ಈ ಸಂವಿಧಾನವು ನಮಗೆ ಗೀತಾ, ಕುರಾನ್ ಮತ್ತು ಬೈಬಲ್‌ಗಿಂತ ಕಡಿಮೆಯಿಲ್ಲ. 1ನೇ ವಿಧಿ ಹೇಳುತ್ತದೆ, INDIA, ಅದು ಭಾರತ, ರಾಜ್ಯಗಳ ಒಕ್ಕೂಟವಾಗಿರುತ್ತದೆ…” ಅಂದರೆ INDIA ಮತ್ತು ಭಾರತಕ್ಕೆ ಯಾವುದೇ ವ್ಯತ್ಯಾಸವಿಲ್ಲ. ಎರಡರ ನಡುವೆ ಅನಗತ್ಯವಾಗಿ ಬಿರುಕು ಮೂಡಿಸಲು ಪ್ರಯತ್ನಿಸದಿದ್ದರೆ, ಅದು ಉತ್ತಮವಾಗಿರುತ್ತದೆ” ಎಂದು ಹೇಳಿದರು.

ಸಾಮಾನ್ಯವಾಗಿ ‘ಇಂಡಿಯಾದ ರಾಷ್ಟ್ರಪತಿ’ ಎಂದು ಬಳಸಲಾಗುತ್ತದೆ. ಆದರೆ G20 ಔತಣಕೂಟದ ಆಹ್ವಾನದಲ್ಲಿ ‘ಭಾರತದ ಅಧ್ಯಕ್ಷ’ ಹೆಸರಿನಲ್ಲಿ ಕಳುಹಿಸಲಾಯಿತು. ಇದು INDIA ಮತ್ತು ಭಾರತ ನಡುವಿನ ರಾಜಕೀಯ ಗದ್ದಲಕ್ಕೆ ಕಾರಣವಾಯಿತು. ಇಂದು ಲೋಕಸಭೆಯಲ್ಲಿ ಈ ವಿಚಾರವನ್ನು ಕಾಂಗ್ರೆಸ್ ನಾಯಕ ಚೌಧರಿ ಪ್ರಸ್ತಾಪಿಸಿದರು. 26 ವಿರೋಧ ಪಕ್ಷಗಳು ಒಗ್ಗೂಡಿ ತನ್ನನ್ನು ತಾನು ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (I.N.D.I.A) ಎಂದು ಒಕ್ಕೂಟ ರಚನೆ ಮಾಡಿದವು. ಹಾಗಾಗಿ ಈ ‘INDIA’ ಎನ್ನುವ ಹೆಸರಿನ ಮೇಲೆ ಕೇಂದ್ರ ಬಿಜೆಪಿ ದಾಳಿ ನಡೆಸುತ್ತಿದೆ.

ಈ ಮಧ್ಯೆ ‘ನಾರಿ ಶಕ್ತಿ ವಂದನ್ ಅಧಿನಿಯಮ್’ (ಮಹಿಳಾ ಮೀಸಲಾತಿ ಮಸೂದೆ)ಯ ಶ್ರೇಯವನ್ನು ನಮ್ಮದು ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

 

 

 

Related Articles

Back to top button
error: Content is protected !!