ನ.24ಕ್ಕೆ ಬೆಂಗಳೂರಿನಲ್ಲಿ ಕಂಬಳ: ರಾಜಕಾರಣಿಗಳು,ಸ್ಟಾರ್ ಕಲಾವಿದರು ಸಾಥ್

Views: 1
ಕರಾವಳಿಯಲ್ಲಿ ನೂರಾರು ವರ್ಷಗಳ ಇತಿಹಾಸವಿರುವ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಕಂಬಳವನ್ನು ಬೆಂಗಳೂರಿನಲ್ಲಿ ನಡೆಸಲು ತಿರ್ಮಾನ ಆಗಿದೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ನವೆಂಬರ್ 24ಕ್ಕೆ ಕಾರ್ಯಕ್ರಮ ಶುಭಾರಂಭ ಆಗಲಿದೆ. 23 ಮತ್ತು 25 ಕೋಣಗಳು ಅಖಾಡದಲ್ಲಿ ಅಬ್ಬರಿಸಲಿದ್ದಾರೆ. ಬೆಂಗಳೂರಿನ ಜನಕ್ಕೆ ಕಂಬಳವನ್ನು ನೋಡಿ ಕಣ್ತುಂಬಿಕೊಳ್ಳುವ ಟೈಮ್ ಹತ್ತಿರ ಬಂದಿದೆ.
ಕಂಬಳ ನಡೆಸಲು ಕೆಲಸ ಶುರುವಾಗಿದೆ. 150ಕ್ಕೂ ಹೆಚ್ಚಿನ ಕೋಣಗಳು ಈ ಪೈಪೋಟಿಯಲ್ಲಿ ಭಾಗಿಯಾಗಲಿದೆ. ಸುಮಾರು 7 ಲಕ್ಷ ಜನ ಈ ಕಂಬಳದಲ್ಲಿ ಭಾಗಿಯಾಗುವ ನಿರೀಕ್ಷೆಯಲ್ಲಿದ್ದಾರೆ ಆಯೋಜಕರು. ಇದಕ್ಕೆ ಈಗಾಗ್ಲೇ ಸಿದ್ದತೆಗಳು ಕೂಡ ಜೋರಾಗಿದೆ.
ಇದರ ಜೊತೆಯಲ್ಲಿ ಕಂಬಳದ ಆಯೋಜಕರಿಗೆ ಹೊಸದೊಂದು ಐಡಿಯಾ ಬಂದಿದೆ. ಕಂಬಳವನ್ನು ಇನ್ನೂ ಕುತೂಹಲ ಭರಿತವಾಗಿ ಜನರ ಮುಂದಿಡುವ ಯೋಚನೆ ಮಾಡ್ತಿದೆ. ಐಪಿಎಲ್ ಮಾದರಿಯಲ್ಲಿ ಕಂಬಳವನ್ನು ಆಯೋಜಿಸುವ ಚಿಂತನೆ ಶುರುವಾಗಿದೆ. ಐಪಿಎಲ್ ಆಯೋಜನೆ ಮಾಡಿದ ತಂಡದ ಸದಸ್ಯರ ಜೊತೆ ಕಂಬಳದ ಟೀಮ್ ಮಾತು-ಕತೆ ಕೂಡ ನಡೆಸಿದ್ದಾರೆ.
ಕರಾವಳಿಯ ಕಲಾವಿದರ ತಂಡಗಳನ್ನು ಮಾಡಿ ಆ ತಂಡಗಳಿಗೆ ಬಲಿಷ್ಠ ಕೋಣಗಳನ್ನ ಸೇರಿಸಿ ಜನರಿಗೆ ಮತ್ತಷ್ಟು ಹತ್ತಿರವಾಗುವ ಯೋಚನೆಯಲ್ಲಿದ್ದಾರೆ.
ಕಾಂತಾರ ಹೀರೋ ರಿಷಬ್ ಈಗಾಗ್ಲೇ ಕೋಣಗಳ ಜೊತೆ ಸಿನಿಮಾದಲ್ಲಿ ಕಂಬಳದ ಅಂಗಳಲ್ಲಿ ಇಳಿದು ಸಕ್ಸಸ್ ಆಗಿದ್ದಾರೆ. ರಿಷಬ್ ಶೆಟ್ಟಿ ಕೋಣಗಳಿಗೆ ರಕ್ಷಿತ್ ಶೆಟ್ಟಿ ಪೈಪೋಟಿ ಕೊಡೋ ರೀತಿ ಆಯೋಜಕರು ಪ್ಲ್ಯಾನ್ ಮಾಡ್ತಿದ್ದಾರೆ. ಇವರ ಜೊತೆ ರಿಯಲ್ ಸ್ಟಾರ್ ಉಪೇಂದ್ರ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇನ್ನೂ ಉಪ್ಪಿ ಸುಮ್ಮನೆ ಇರ್ತಾರ ನಾವು ಒಂದು ಕೈ ನೋಡೋಣ ಅಂತ ಅವರೂ ಅಖಾಡಕ್ಕೆ ಇಳಿದು ಫೈಟ್ ಮಾಡದೆ ಬಿಡ್ತಾರ. ಈ ಹೀರೋಗಳ ಜೊತೆ ಬಾಲಿವುಡ್, ಟಾಲಿವುಡ್ ನಟಿಯರೂ ಸೇರಿಕೊಳ್ಳಲಿದ್ದಾರೆ.
ಬೆಂಗಳೂರು ಕಂಬಳಕ್ಕೆ ಮಾಜಿ ವಿಶ್ವಸುಂದರಿ ಐಶ್ವರ್ಯ ರೈ ಕೂಡ ಭಾಗಿಯಾಗಲಿದ್ದಾರೆ. ಬಾಹುಬಲಿ ಬೆಡಗಿ ಕರಾವಳಿ ಹುಡುಗಿ ಅನುಷ್ಕಾ ಶೆಟ್ಟಿ ಕೂಡ ಕಂಬಳಕ್ಕೆ ಜೊತೆ ಆಗ್ತಾರೆ. ಇದರ ಜೊತೆ ಬೇರೆ ಬೇರೆ ರಾಜ್ಯಗಳಲ್ಲಿ ಹೆಸರು ಮಾಡಿರುವ ಕಲಾವಿದರು ಕೂಡ ಕರಾವಳಿ ಕ್ರೀಡೆಯ ಯಶಸ್ಸಿಗೆ ಕೈ ಜೋಡಿಸಲಿದ್ದಾರೆ. ಈ ಕೆಲಸಕ್ಕೆ ಸಂಗೀತ ನಿರ್ದೇಶಕ ಗುರುಕಿರಣ್ ಅವರನ್ನು ನೇಮಿಸಿದ್ದಾರೆ ಕಂಬಳದ ಆಯೋಜಕರು.
ಊರು-ಕೇರಿಗಳಲ್ಲಿರುವ ಕಂಬಳದ ಮನಸ್ಸುಗಳನ್ನು ಒಟ್ಟಿಗೆ ಒಂದೇ ವೇದಿಕೆಗೆ ಕರೆಸುವ ಕೆಲಸ ಮಾಡ್ತಿದ್ದಾರೆ. ಆಯೋಜಕರ ಚಿಂತನೆಯಲ್ಲಿ ಐಪಿಎಲ್ ಮಾದರಿಯಲ್ಲಿ ಕಂಬಳ ನಡೆಸಲು ಇಬ್ಬರ ಅನುಮತಿ ಬೇಕಾಗುತ್ತೆ. ಕಂಬಳದ ಮುಖ್ಯ ಫಿಲ್ಲರ್ಗಳು ಅಂದ್ರೆ ಅದು ಕೋಣೆಗಳನ್ನು ಸಾಕಿರುವ ಮಾಲಿಕರು ಮತ್ತು ಅದನ್ನ ನೋಡಿ, ಪ್ರೀತಿಸಿ, ಆರಾಧಿಸುವ ಜನರು ಇವರಿಬ್ಬರೂ ಒಪ್ಪಿಗೆ ಕೊಟ್ರೆ ಕಂಬಳವನ್ನು ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗಲು ನಾವು ರೆಡಿ ಅಂತಿದ್ದಾರೆ ಆಯೋಜಕರು.
ಬಣ್ಣದ ಲೋಕದ ಮಂದಿ ಜೊತೆ ರಾಜಕಾರಣಿಗಳು ಕೂಡ ಅಖಾಡಕ್ಕೆ ಇಳಿಯಲಿದ್ದಾರೆ. ಶಾಸಕ ಹ್ಯಾರಿಸ್, ಅಶ್ವತ್ ನಾರಾಯಣ, ಸಚಿವ ಸುಧಾಕರ್, ಸ್ಪೀಕರ್ ಖಾದರ್ ಸೇರಿದಂತೆ ಹಲವರು ನಮಗೂ ಕೋಣಗಳನ್ನ ಕೋಡಿ ನಾವು ನಮ್ಮ ತಂಡದ ಜೊತೆ ಟಫ್ ಫೈಟ್ ಕೊಡ್ತಿವಿ ಅಂತ ಆಯೋಜಕ ಮುಂದೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದ್ರೆ ಇನ್ನೂ ಕೋಣಗಳ ಮಾಲಿಕರ ಜೊತೆ ಚರ್ಚೆ ಅಂತಿಮ ಆಗ್ಬೇಕಿದೆ ಆಮೇಲೆ ಉಳಿದ ವಿಚಾರ ಅಂತಿದ್ದಾರೆ ಬೆಂಗಳೂರು ಕಂಬಳದ ಆಯೋಜಕರು.