ಸಾಂಸ್ಕೃತಿಕ

ಮೈಸೂರು ದಸರಾಕ್ಕೆ ಉಗ್ರರ ಕರಿನೆರಳು:  ಪೊಲೀಸರು ಹೈಅಲರ್ಟ್ ಇರುವಂತೆ ಕೇಂದ್ರ ಗುಪ್ತಚರ ಇಲಾಖೆ ಸೂಚನೆ 

Views: 0

ಮೈಸೂರು: ಒಂದು ಕಡೆ ಕ್ರಿಕೆಟ್ ಮ್ಯಾಚ್, ಮತ್ತೊಂದೆಡೆ ದಸರಾ ಉತ್ಸವ ನಡೆಯುತ್ತಿದೆ. ಈ ಹಿನ್ನಲೆ ಕ್ರಿಕೆಟ್ ಜತೆಗೆ ದಸರಾಕ್ಕೂ ಪೊಲೀಸ್​​ ಬಂದೋಬಸ್ತ್ ಹೆಚ್ಚಿಸಲಾಗಿದೆ.

ದೇಶ-ವಿದೇಶಗಳಿಂದ ಪ್ರವಾಸಿಗರು ವಿಶ್ವವಿಖ್ಯಾತ ಮೈಸೂರು ದಸರಾ ನೋಡಲು ಬರುತ್ತಿದ್ದಾರೆ. ಈ ಬಾರಿ ಉಗ್ರರ ಕರಿನೆರಳು ಮೈಸೂರು ದಸರಾ ಮೇಲೆ ಬಿದ್ದಿದೆ ಎನ್ನುವ ಮಾಹಿತಿ ಹಿನ್ನಲೆ ಪೊಲೀಸ್​ ಇಲಾಖೆ ತುರ್ತಾಗಿ ಭದ್ರತೆ ಹೆಚ್ಚಿಸಿದೆ.

ಶ್ರೀರಂಗಪಟ್ಟಣ, KRS ಪೊಲೀಸರಿಗೂ ಅಲರ್ಟ್ ಇರುವಂತೆ ಕೇಂದ್ರ ಗುಪ್ತಚರ ಇಲಾಖೆ ಸೂಚನೆ ನೀಡಿದೆ. ನಕಲಿ ಪಾಸ್ ಪೋರ್ಟ್ ಪಡೆದು ಸುಮಾರು 70 ಜನರು ಅಕ್ರಮವಾಗಿ ದೇಶದೊಳಗೆ ನುಸುಳಿರುವ ಮಾಹಿತಿಯನ್ನು ಕೇಂದ್ರ ಐಬಿ ಟೀಂ ಮಾಹಿತಿ ಕಲೆಹಾಕಿದೆ.

ಡಿಜಿ & ಐಜಿಪಿ ಅಲೋಕ್ ಮೋಹನ್ ಅವರು ತುರ್ತಾಗಿ ಇಂದು ಬೆಳಗ್ಗೆ 9 ಗಂಟೆಗೆ 1568 ಪೊಲೀಸರ ನಿಯೋಜನೆ ಮಾಡಿದ್ದು, ಜೊತೆಗೆ 40 CAR ತುಕಡಿಗಳು, 30 KSRP ತುಕಡಿಗಳನ್ನು ನಿಯೋಜಿಸಿದ್ದಾರೆ. ಪ್ರತಿ ಬಾರಿ ದಸರಾಗೆ 1700 ರಿಂದ 2000 ಪೊಲೀಸರ ನಿಯೋಜಿಸಲಾಗುತ್ತಿತ್ತು. ಈ ಬಾರಿ ಭದ್ರತೆಗೆ 3500ಕ್ಕೂ ಹೆಚ್ಚು ಪೊಲೀಸರು, ರಾಜ್ಯದ ಎಲ್ಲಾ ವಲಯ, ಸಿಐಡಿ, ಐಎಸ್​ಡಿಯಿಂದಲೂ ನಿಯೋಜನೆ ಮಾಡಲಾಗಿದೆ.

Related Articles

Back to top button
error: Content is protected !!