ಕರಾವಳಿ
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಉಡುಪಿ ಜಿಲ್ಲೆಯ ಗುಮಟೆ ನೃತ್ಯ ತಂಡ ಪ್ರಥಮ

Views: 1
ಉಡುಪಿ,: ದಸರಾ ಮೈಸೂರಿನಲ್ಲಿ ನಡೆದ ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆಯಲ್ಲಿ ಉಡುಪಿ ಜಿಲ್ಲೆಯ ತಂಡ ಪ್ರಥಮ ಬಹುಮಾನವನ್ನು ಪಡೆದುಕೊಂಡಿದೆ.
ಮೆರವಣಿಗೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಸಿ.ಚಂದ್ರನಾಯ್ಕ್ ನೇತೃತ್ವದ ಹೆಗ್ಗುಂಜೆ ಶ್ರೀ ಮಲ್ಲಿಕಾರ್ಜುನ ಕುಡುಬಿ ಹೋಳಿ ಜಾನಪದ ಕಲಾಸಂಘವು ಗುಮಟೆ ನೃತ್ಯ ಪ್ರದರ್ಶಿಸಿದ್ದು, ಪ್ರಥಮ ಸ್ಥಾನದೊಂದಿಗೆ 15,000 ರೂ. ನಗದು ಬಹುಮಾನ ಪಾರಿತೋಷಕ ಪಡೆದಿದೆ ಎಂದು ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.